ಟ್ಯಾಂಕರ್ ಢಿಕ್ಕಿ: ಪಾದಚಾರಿ ಮೃತ್ಯು
ಬಂಟ್ವಾಳ, ಜೂ. 15: ಟ್ಯಾಂಕರ್ವೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿಹೊಡೆದ ಪರಿಣಾಮ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಬಳಿ ಶನಿವಾರ ನಡೆದಿದೆ.
ಪೊಳಲಿ ಸಮೀಪದ ಮಲ್ಲೂರು ನಿವಾಸಿ ಯಾದವ ಪೂಜಾರಿ (53) ಮೃತಪಟ್ಟರು. ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರ ಕಡೆಯಿಂದ ಬಿ.ಸಿ.ರೋಡ್ ನತ್ತ ಅತೀ ವೇಗ ಅಜಾಗರುಕತೆಯಿಂದ ಚಲಾಯಿಸಿ ಬಂದ ಟ್ಯಾಂಕರ್ ಢಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಶರಣ ಗೌಡ, ಬಂಟ್ವಾಳ ಟ್ರಾಫಿಕ್ ಎಸ್ಸೈ ಮಂಜುನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Next Story