ಜೋಯಾಲುಕ್ಕಾಸ್ ವತಿಯಿಂದ ರಕ್ತದಾನ ಶಿಬಿರ
ಮಂಗಳೂರು, ಜೂ.17:ನಗರದ ಜೋಯಾಲುಕ್ಕಾಸ್ ಆಭರಣ ಮಳಿಗೆಯಲ್ಲಿಂದು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಈ ಸಂದರ್ಭದಲ್ಲಿ ರೆಡ್ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಮ ಶೆಟ್ಟಿ, ಬಂದರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಫೆಕ್ಟರ್ ಗೋವಿಂದ ರಾಜು, ಜೋಯಾಲುಕ್ಕಾಸ್ನ ಬ್ರಾಂಚ್ ಮ್ಯಾನೇಜರ್ ಹರೀಶ್ ಪಿ.ಎಸ್, ಸಹಾಯಕ ಬ್ರಾಂಚ್ ಮ್ಯಾನೇಜರ್ ವೀರೇಂದ್ರ ಮೊದಲಾದವರು ಉಪಸ್ಥಿತರಿದ್ದರು.
Next Story