ಉಡುಪಿ: ಜೋಯಲುಕ್ಕಾಸ್ನಲ್ಲಿ ರಕ್ತದಾನ ಶಿಬಿರ
ಉಡುಪಿ, ಜೂ.18: ಬಡಗುಪೇಟೆಯಲ್ಲಿರುವ ಜೋಯಲುಕ್ಕಾಸ್ ಉಡುಪಿ ಮಳಿಗೆ ಮತ್ತು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರವನ್ನು ಜೂ.17ರಂದು ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ವೀಣಾ ಮಾತನಾಡಿ, ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ವನ್ನು ಉಳಿಸಿದ ಪುಣ್ಯದ ಜೊತೆಯಲ್ಲಿ ಉತ್ತಮ ಆರೋಗ್ಯ ದೊರೆಯುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಸೇರಿ ಸುಮಾರು 40 ಮಂದಿ ರಕ್ತದಾನ ಮಾಡಿದರು. ಸಂಸ್ಥೆಯ ಮೇನೇಜರ್ ಗೋಕುಲ್ ದಾಸ್, ಎಎಸ್ಟಿ ಮೇನೇಜರ್ ವಿವೇಕ್ ಮೊದಲಾದವರು ಉಪಸ್ಥಿತರಿದ್ದರು.
Next Story