ವ್ಯಕ್ತಿ ವಿಕಸನಕ್ಕೆ ಪದವಿ ಶಿಕ್ಷಣ ರಹದಾರಿ: ರವಿರಾಜ ನಾಯಕ್
ಉಡುಪಿ, ಜೂ.20:ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ 2019-20ನೇ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಐಸಿಐಸಿಐ ಪ್ರೊಡೆನ್ಶಿಯಲ್ ಲಿಮಿಟೆಡ್ನ ರವಿರಾಜ ನಾಯಕ್, ವಿದ್ಯಾರ್ಥಿಗಳಿಗೆ ಪದವಿ ತರಗತಿ ಗಳಿಂದಲೇ ಉತ್ತಮ ಸಂವಹನ, ಶಿಸ್ತು ಅಗತ್ಯ. ಎಲ್ಲಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆಯಿಂದ ವ್ಯಕ್ತಿತ್ವದ ಅನಾವರಣಗೊಳ್ಳಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ದಿನೇಶ್ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಐಕ್ಯುಎಸಿ ಸಂಚಾಲಕಿ ಸುಮನಾ ಬಿ. ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಪಾಲನಾ ಸಮಿತಿಯ ಸಂಚಾಲಕಿ ಸುಜಯಾ ಕೆ. ಎಸ್. ವಂದಿಸಿದರು. ಪ್ರವೀಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Next Story