ಉಪ್ಪೂರು ಸಮೀಪ ಟಿಪ್ಪರ್ ಪಲ್ಟಿ: ಚಾಲಕ ಸಹಿತ ಇಬ್ಬರು ಮೃತ್ಯು
ಬ್ರಹ್ಮಾವರ, ಜೂ.21: ಟಿಪ್ಪರೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆದಲ್ಲಿರುವ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ 7:25ರ ಸಮಾರಿಗೆ ಉಪ್ಪೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಬ್ರಹ್ಮಾವರ ನಿವಾಸಿ ನಾಗರಾಜ್ ಗಾಣಿಗ(30) ಹಾಗೂ ಭಟ್ಕಳದ ಕುಮಾರ್(27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಾಘವೇಂದ್ರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬ್ರಹ್ಮಾವರದಿಂದ ಮಣಿಪಾಲಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಟಿಪ್ಪರ್ ಮಳೆಯ ಕಾರಣದಿಂದ ನಿಯಂತ್ರಣ ತಪ್ಪಿ ರಸ್ತೆಮಧ್ಯದ ಡಿವೈಡರ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಟಿಪ್ಪರ್ ರಸ್ತೆಯಲ್ಲೇ ಮಗು ಬಿದ್ದಿದ್ದು, ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ನಾಗರಾಜ್ ಗಾಣಿಗ ಸ್ಥಳದಲ್ಲಿಯೇ ಮೃತಪಟ್ಟರು. ಕುಮಾರ್ ಚಿಕಿತ್ಸೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಸಂದರ್ಭ ಯೋಗ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕಾರ ನೀಡಿದರು. ಅಪಘಾತದಿಂದ ರಸ್ತೆ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.