ಪುತ್ತೂರು: ಜಮೀಯತುಲ್ ಫಲಾಹ್ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಪುತ್ತೂರು: ಜಮೀಯತ್ತುಲ್ ಫಲಾಹ್ ಪುತ್ತೂರು ಘಟಕ, ಬ್ಯಾರೀಸ್ ಸಮೂಹ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಪುತ್ತೂರು ಮತ್ತು ಆಸುಪಾಸಿನ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಸಲಹೆ ಮತ್ತು ಮಾಹಿತಿ ಕಾರ್ಯಕ್ರಮವು ಶನಿವಾರ ಪುತ್ತೂರು ರೋಟರಿ ಜಿ.ಎಲ್. ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಿಇಟಿಯಲ್ಲಿ ಅಧಿಕ ರ್ಯಾಂಕ್ ಪಡೆದು ಇಂಜಿನಿಯರಿಂಗ್ ಮಾಡಲು ಸಾಧ್ಯವಾಗದ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅನುತ್ತೀರ್ಣಗೊಂಡ, ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಮಗ್ರ ಮಾರ್ಗದರ್ಶನ, ಅರಿವು ಸಾಲ ಮತ್ತು ವಿದ್ಯಾರ್ಥಿ ವೇತನದ ಬಗ್ಗೆ ಅಲ್ಪ ಸಂಖ್ಯಾತ ಇಲಾಖೆಯ ಅಧಿಕಾರಿಗಳಿಂದ ಸೂಕ್ತ ಸಲಹೆ ಮತ್ತು ಮಾಹಿತಿ ಉದ್ಯೋಗ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಬೇಡಿಕೆಗಳಿರುವ ಕೋರ್ಸ್ಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನೀಡಲಾಯಿತು.
ಮಂಗಳೂರು ಕೆರಿಯರ್ ಗೈಡೆನ್ಸ್ ಚೆಯರ್ ಮ್ಯಾನ್ ಯು.ಎಚ್. ಉಮ್ಮರ್, ಕರ್ನಾಟಕ ಅಲ್ಪ ಸಂಖ್ಯಾತ ಅಭಿವೃದ್ಧಿ ವಿಭಾಗದ ನಿರ್ದೇಶಕ ಸಫ್ವಾನ್, ಪುತ್ತೂರು ಅಲ್ಪ ಸಂಖ್ಯಾತ ಕಚೇರಿಯ ಮೆನೇಜರ್ ನಝೀರ್, ಬ್ಯಾರೀಸ್ ಇನ್ಸ್ ಟಿ ಟ್ಯೂಟ್ ಆಫ್ ಟೆಕ್ನಾಲಜಿ ಇದರ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಮುಸ್ತಫಾ, ಬ್ಯಾರೀಸ್ ಇನ್ಸ್ ಟಿ ಟ್ಯೂಟ್ ಆಫ್ ಟೆಕ್ನಾಲಜಿ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ. ಇಮ್ರಾನ್, ಬ್ಯಾರೀಸ್ ಇನ್ಸ್ ಟಿ ಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕ ಪ್ರೊ. ರಫೀಕ್, ಬ್ಯಾರೀಸ್ ಇನ್ಸ್ ಟಿ ಟ್ಯೂಟ್ ಆಫ್ ಟೆಕ್ನಾಲಜಿ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕ ಪ್ರೊ. ಸಫ್ವಾನ್, ಮಿತ್ತೂರು ಕೆಜಿಎನ್ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಇಸ್ತಿಕಾರ್ ವಿವಿಧ ಮಾಹಿತಿಗಳನ್ನು ನೀಡಿದರು.
ಜಮೀಯತ್ತುಲ್ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಉಪಸ್ಥಿತರಿದ್ದರು. ಪುತ್ತೂರು ಜಮೀಯತ್ತುಲ್ ಫಲಾಹ್ ಪುತ್ತೂರು ಘಟಕದ ಅಧ್ಯಕ್ಷ ನ್ಯಾಯವಾದಿ ಫಝ್ಲುಲ್ ರಹೀಂ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಪುತ್ತೂರು ಜಮೀಯತ್ತುಲ್ ಫಲಾಹ್ ಘಟಕದ ಪ್ರಧಾನ ಕಾರ್ಯದರ್ಶಿ ಶೇಖ್ ಝೈನುದ್ದೀನ್ ವಂದಿಸಿದರು.
ಜಮೀಯತ್ತುಲ್ ಫಲಾಹ್ ಪುತ್ತೂರು ಘಟಕದ ಮಾಜಿ ಅಧ್ಯಕ್ಷ ಎಂ. ಎಂ. ಅಬ್ದುಲ್ ಅಝೀಝ್ ದುವಾ ನೆರವೇರಿಸಿದರು.