ಎಲ್ಲೂರು ಯುಪಿಸಿಎಲ್ ಸ್ಥಾವರದಲ್ಲಿ ರಕ್ತದಾನ ಶಿಬಿರ
ಉಡುಪಿ, ಜೂ.25: ಎಲ್ಲೂರು ಗ್ರಾಮದ ಅದಾನಿ ಯುಪಿಸಿಎಲ್ ಸಂಸ್ಥೆಯ ಅದಾನಿ ಫೌಂಡೇಶನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ‘ಗೋ-ರೆಡ್’ನ್ನು ಜೂ.24ರಂದು ಯುಪಿಸಿಎಲ್ ಸ್ಥಾವರದಲ್ಲಿ ಆಯೋಜಿಸಲಾಗಿತ್ತು.
ಅದಾನಿ ಸಮೂಹದ ಸ್ಥಾಪಕ ಅಧ್ಯಕ್ಷ ಗೌತಮ್ ಅದಾನಿ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಅದಾನಿ ಯುಪಿಸಿಎಲ್ನ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಯುಪಿಸಿಎಲ್ ಸಂಸ್ಥೆ ಯಲ್ಲಿ ಪ್ರತಿ ವರ್ಷವು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ರಕ್ತದಾನ ಶಿಬಿರದಲ್ಲಿ ಭಾಗವಹಿಸುತ್ತಿರುವುದು ಹರ್ಷಕರ ಸಂಗತಿ ಎಂದು ಹೇಳಿದರು.
ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾ ಕುಮಾರಿ, ಮಂಗಳೂರು ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಶರತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಯುಪಿ ಸಿಎಲ್ ಹಾಗೂ ಇತರೆ ಗುತ್ತಿಗೆ ಆಧಾರಿತ ಉದ್ಯೋಗಿಗಳು ಸ್ವಇಚ್ಚೆಯಿಂದ ಭಾಗವಹಿಸಿದ್ದು, ಸುಮಾರು 380 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
Next Story