ಸಿಎಫ್ಐಯಿಂದ ‘ಆರೋಗ್ಯಕರ ಕ್ಯಾಂಪಸ್’ ಅಭಿಯಾನ
ಉಡುಪಿ, ಜೂ.29: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ವತಿಯಿಂದ ‘ಆರೋಗ್ಯಕರ ಕ್ಯಾಂಪಸ್- ಜಲಸಂರಕ್ಷಣೆ ನಮ್ಮ ಹೊಣೆ’ ಅಭಿಯಾನವನ್ನು ಇಂದು ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಜಲ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಸಿಎಫ್ಐ ಜಿಲ್ಲಾ ಉಪಾಧ್ಯಕ್ಷ ತೌಹೀದ್ ಅಹ್ಮದ್ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ಶಾಹೀದ್ ಮಲ್ಪೆ ಉಪಸ್ಥಿತರಿದ್ದರು.
Next Story