ಉಳಾಯಿಬೆಟ್ಟು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಆಶ್ರಯದಲ್ಲಿ ರಕ್ತದಾನ ಶಿಬಿರ
ಉಳಾಯಿಬೆಟ್ಟು, ಜು.8: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಆಶ್ರಯದಲ್ಲಿ ಉಳಾಯಿಬೆಟ್ಟು ಎಸ್.ಡಿ.ಎಂ.ಸಿ., ಹಳೆ ವಿದ್ಯಾರ್ಥಿ ಸಂಘ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ಸಹಕಾರದಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ ರವಿವಾರ ಉಳಾಯಿಬೆಟ್ಟು ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.
ಲಿಸ್ಟನ್ ಫೆರ್ನಾಂಡಿಸ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಅಬ್ದುಲ್ಲ ಕುಂಞಿ, ಕಮಲಾಕ್ಷ ತಲ್ಲಿಮಾರು, ಮುಸ್ತಫ ಅಡ್ಡೂರು ದೆಮ್ಮಲೆ, ಮನ್ಸೂರ್ ಎಂ., ನವಾಝ್ ಕೆ.ಬಿ.ಆರ್. ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಸ್ಥೆಯ ನಿರ್ವಾಹಕ ಅಶ್ರಫ್ ಅರಬಿ ಕಲ್ಲಡ್ಕ ನಿರೂಪಿಸಿದರು.
ಶಿಬಿರದಲ್ಲಿ ಒಟ್ಟು 32 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಿದರು.