ಮೂಳೂರು : ಬಸ್ ಢಿಕ್ಕಿ- ಗಾಯಾಳು ವಿದ್ಯಾರ್ಥಿನಿ ಮೃತ್ಯು
ಕಾಪು: ಮೂಳೂರಿನಲ್ಲಿ ಮೂರು ದಿನಗಳ ಹಿಂದೆ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮೂಳೂರು ತೊಟ್ಟಂ ವೀರ ಮಾರುತಿ ನಗರ ಕಾಲನಿ ಸದಾಶಿವ ಸಾಲ್ಯಾನ್ ಅವರ ಪುತ್ರಿ ಸುನಯ್ಯಾ (16) ಮೃತ ವಿದ್ಯಾರ್ಥಿನಿ. ಈಕೆ ಉಡುಪಿ ಸರ್ಕಾರಿ ಬಾಲಕಿಯರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಬೆಳಗ್ಗೆ ಕಾಲೇಜಿಗೆ ಹೋಗಲೆಂದು ಬಸ್ ಗಾಗಿ ಕಾಯುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಸ್ಥಳೀಯರು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಕಳೆದ ಮೂರು ದಿನಗಳಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ಬಾಲಕಿ ಗುರುವಾರ ಮಧ್ಯಾಹ್ನ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Next Story