ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನವನೀತ್ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ
ಉಡುಪಿ, ಜು.12: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನವನೀತ್ ಶೆಟ್ಟಿ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಇಂದು ಆದೇಶ ನೀಡಿದೆ.
ಜಾಮೀನು ನೀಡುವಂತೆ ಕೋರಿ ನವನೀತ್ ಶೆಟ್ಟಿ ಪರ ವಕೀಲರು ನ್ಯಾಯಾ ಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಧೀಶ ಜೋಶಿ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದರು. ನವನೀತ್ ಶೆಟ್ಟಿ ಈ ಹಿಂದೆ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಆತನ ಅರ್ಜಿಯನ್ನು ತಿರಸ್ಕರಿಸಿತ್ತು.
Next Story