ಅಕ್ರಮ ಜಾನುವಾರು ಸಾಗಾಟ: ಮೂವರು ಆರೋಪಿಗಳು ಸೆರೆ, ಲಾರಿ ವಶಕ್ಕೆ
ಉಳ್ಳಾಲ: ಉಳ್ಳಾಲ ಠಾಣೆ ವ್ಯಾಪ್ತಿಯ ತಲಪಾಡಿ ಸಮೀಪದ ದೇವಿಪುರ ಎಂಬಲ್ಲಿ ಜಾನುವಾರುಗಳನ್ನು ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಕಂಟೇನರ್ ಲಾರಿಯನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಪೊಲೀಸರು ತಲಪಾಡಿ ದೇವಿಪುರ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಟೋಲ್ಗೇಟ್ ಬಳಿಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಕಂಟೇನರ್ ಲಾರಿಯನ್ನು ತಡೆಯಲು ಯತ್ನಿಸಿದ್ದು ಈ ವೇಳೆ ಲಾರಿಯನ್ನು ಚಾಲಕ ಅಲ್ಲಿ ನಿಲ್ಲಿಸದೆ ಮುಂದೆ ಹೋಗಿದ್ದನೆನ್ನಲಾಗಿದ್ದು, ಈ ವೇಳೆ ಪೊಲೀಸರು ತಪಾಸಣೆ ನಡೆಸಿ ಜಾನುವಾರುಗಳನ್ನು ವಶಕ್ಕೆ ಪಡೆದು, ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
Next Story