ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ಕಸ್ಟಡಿಗೆ
ಹಿರಿಯಡ್ಕ, ಜು.15: ಖಾಸಗಿ ಬಸ್ ನಿರ್ವಾಹಕ, ಬೈರಂಪಳ್ಳಿ ಗ್ರಾಮದ ದೂಪದಕಟ್ಟೆಯ ಹುಣ್ಸೆಬಾಕೇರ್ ನಿವಾಸಿ ಪ್ರಶಾಂತ್ ಪೂಜಾರಿ (37) ಕೊಲೆ ಪ್ರಕರಣದ ಬಂಧಿತ ಆರೋಪಿ ಕುಕ್ಕೆಹಳ್ಳಿ ಬುಕ್ಕಿಗುಡ್ಡೆಯ ರಕ್ಷಕ್ ಪೂಜಾರಿ (19) ಎಂಬಾತನನ್ನು ಪೊಲೀಸರು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಕೊಂಡಿದ್ದಾರೆ.
ಇಂದು ಸಂಜೆ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖಾಧಿಕಾರಿಗಳ ಮನವಿಯಂತೆ ಆರೋಪಿಯನ್ನು ನ್ಯಾಯಾ ಲಯ ಜು.18ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ವಶಕ್ಕೆ ಪಡೆದುಕೊಂಡ ಆರೋಪಿಯನ್ನು ತೀವ್ರವಾಗಿ ವಿಚಾರಣೆ ಒಳಪಡಿಸಿರುವ ಪೊಲೀಸರು, ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
ತಲೆಮರೆಸಿಕೊಂಡಿರುವ ಈ ಪ್ರಕರಣದ ಇನ್ನೊರ್ವ ಆರೋಪಿ ಪೆರ್ಡೂರು ಆಲಂಗಾರು ನಿವಾಸಿ ಸಚಿನ್ ನಾಯ್ಕೊ(24) ಎಂಬಾತನಿಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದು, ಆದರೆ ಆತನ ಬಗ್ಗೆ ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Next Story