ಅಕ್ರಮ ಜಾನುವಾರುಗಳ ಸಾಗಾಟ: ವಾಹನ ವಶ
ಬಂಟ್ವಾಳ, ಜು. 17: ಐಸ್ಕ್ರೀಂ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟದ ಆರೋಪದ ಮೇರೆಗೆ ದಾಳಿ ನಡೆಸಿ, ವಾಹನ ಸಹಿತ ಮೂರು ದನಗಳನ್ನು ವಶಪಡಿಸಿಕೊಂಡ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಕಟ್ಟತ್ತಿಲ ಎಂಬಲ್ಲಿ ಬುಧವಾರ ನಡೆದಿದೆ. ದಾಳಿಯ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಲೆತ್ತೂರು ರಸ್ತೆ ಮೂಲಕ ಕೇರಳಕ್ಕೆ ಐಸ್ಕ್ರೀಂ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಸಾಲೆತ್ತೂರು ಕಟ್ಟತ್ತಿಲ ಎಂಬಲ್ಲಿ ವಿಟ್ಲ ಎಸ್ಸೈ ಯಲ್ಲಪ್ಪ ಹಾಗೂ ಸಿಬ್ಬಂದಿ ತಪಾಸಣೆ ನಡೆಸಿದೆ. ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದು, ವಾಹನದಲ್ಲಿ ಮೂರು ದನಗಳು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story