ಪಂಡಿತ್ ಹೌಸ್ ಬಳಿ ಬಸ್ ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ
ಉಳ್ಳಾಲ: ತೊಕ್ಕೋಟು ಸಮೀಪದ ಪಂಡಿತ್ ಹೌಸ್ ಬಳಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತೊಕ್ಕೊಟ್ಟು ಕಡೆಯಿಂದ ಕೊಣಾಜೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದು, ಸ್ಥಳಕ್ಕೆ ದಕ್ಷಿಣ ವಲಯ ಸಂಚಾರಿ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Next Story