ಬೈಕ್ ಅಪಘಾತ: ಗಾಯಗೊಂಡ ಯುವಕ ಮೃತ್ಯು
ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಗುರುವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಪಿ.ಎ.ಕಾಲೇಜಿನ ವಿದ್ಯಾರ್ಥಿ ಹಾಗೂ ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸುಲೈಮಾನ್ ಅವರ ಪುತ್ರ ಸವಾದ್ (22) ಎಂದು ಗುರುತಿಸಲಾಗಿದೆ.
ಇವರು ತನ್ನ ಬೈಕ್ ಮೂಲಕ ಕೊಣಾಜೆ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದಾಗ ಎದುರಿನಿಂದ ಬೈಕೊಂದಕ್ಕೆ ಅಸೈಗೋಳಿ ಬಳಿ ಗುರುವಾರ ರಾತ್ರಿ ಪರಸ್ಪರ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಸವಾದ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಸವಾದ್ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷ ದ ವಿದ್ಯಾರ್ಥಿಯಾಗಿದ್ದರು. ತಂದೆ ತಾಯಿ ಹಾಗೂ ಇಬ್ಬರೂ ಸಹೋದರರನ್ನು ಅಗಲಿದ್ದಾರೆ.
Next Story