ಉಡುಪಿ ವೃತ್ತ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ
ಉಡುಪಿ, ಜು.22: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಹಾಗೂ ಬೈಲೂರು ವಾಸುದೇವ ಕೃಪಾ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ವೃತ್ತ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಸೋಮ ವಾರ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾಟಕ್ಕೆ ತಾಲೂಕು ದೈಹಿಕ ಶಿಕ್ಷಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯಿರಿ ಚಾಲನೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ರವೀಂದ್ರ ನಾಯಕ್, ಶಾಲಾ ಸಂಚಾಲಕ ಅಣ್ಣಪ್ಪಶೆಣೈ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಯಾನಂದ ಕೋಟ್ಯಾನ್ ಶುಭ ಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಅಮಿತಾಂಜಲಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕಿಶೋರ್ ವಂದಿಸಿದರು. ಶಿಕ್ಷಕಿಯರಾದ ಶಿಲ್ಪಾದೀಪಕ್ ಹಾಗೂ ದಿವ್ಯಾ ಕುಡ್ವ ಕಾರ್ಯಕ್ರಮ ನಿರೂಪಿಸಿದರು.
Next Story