ಭಟ್ಕಳ : ಜು. 25ರಂದು ಪತ್ರಿಕಾ ದಿನಾಚರಣೆ
ಭಟ್ಕಳ: ಕರ್ನಾಟಕ ಪತ್ರಕರ್ತರ ಸಂಘದ ಅಧೀನಕ್ಕೆ ಒಳಪಟ್ಟಿರುವ ಪತ್ರಕರ್ತರ ಸಂಘ ಭಟ್ಕಳ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕೊದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜು. 25ರಂದು ನಡೆಯಲಿದೆ.
ಅಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಭಟ್ಕಳ ಉಪ ವಿಭಾಗಾಧಿಕಾರಿ ಸಾಜಿದ್ ಅಹ್ಮದ್ ಮುಲ್ಲಾ ಅವರು ಉದ್ಘಾಟಿಸಲಿದ್ದಾರೆ. ಸಂವಾದ ಕಾರ್ಯಕ್ರಮ ನಡೆಸಿಕೊಡಲು ಮಣಿಪಾಲದ ಹಿರಿಯ ಛಾಯಾ ವರದಿಗಾರ ಅಸ್ಟ್ರೋ ಮೋಹನ ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಟ್ಕಳ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಸುರೇಶ ನಾಯಕ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ನಾಯ್ಕ ಆಗಮಿಸಲಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷ ರಾಮಚಂದ್ರ ಕಿಣಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story