ಪ್ರತಿ ತಿಂಗಳು ಜಿಲ್ಲಾ ಕೇಂದ್ರಗಳಿಗೆ ಮುಖ್ಯ ಕಾರ್ಯದರ್ಶಿ ಭೇಟಿ: ಸಿಎಂ ಆದೇಶ
ಬೆಂಗಳೂರು, ಆ.2: ಬರ ನಿರ್ವಹಣೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ಅಧಿಕಾರಿಗಳ ಸಭೆ ನಡೆಸಿದರು.
ಪ್ರತಿ ತಿಂಗಳು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುವಂತೆ ಮುಖ್ಯ ಕಾರ್ಯದಶಿಯವರಿಗೆ ಮುಖ್ಯಮಂತ್ರಿ ಈ ಸಂದರ್ಭ ಆದೇಶಿಸಿದರು. ಸಾರ್ವಜನಿಕರ ಕೆಲಸಗಳು ಸುಗಮವಾಗಿ ಆಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಸಿಎಂ, ಜನರ ಸಮಸ್ಯೆ ಪರಿಹಾರ ಮಾಡಲು ತುರ್ತು ಕ್ರಮ ಅನುಸರಿಸಬೇಕು. ಅನಗತ್ಯ ವಿಳಂಬ, ಕಚೇರಿಗಳ ಸುತ್ತಾಟ ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳು ಉಪಸ್ಥಿತರಿದ್ದರು.
Next Story