ದಾಮೋದರ್ ಉಳ್ಳಾಲ್ ನಿಧನ
ಉಳ್ಳಾಲ: ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಮಾಜಿ ಮೊಕ್ತೇಸರ, ಸಾಮಾಜಿಕ ಕಾರ್ಯಕರ್ತ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮುನ್ನೂರು ಸಂತೋಷ್ ನಗರ ನಿವಾಸಿ ದಾಮೋದರ್ ಉಳ್ಳಾಲ್ (83) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನಹೊಂದಿದರು.
ಮೃತರು ಪತ್ನಿ, ಪುತ್ರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ರಿಕ್ಷಾ ಚಾಲಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಅವರನ್ನು ಉತ್ತಮ ರಿಕ್ಷಾ ಚಾಲನೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಜಿಲ್ಲಾಡಳಿತ ಗೌರವಿಸಿತ್ತು. ಭಾರತೀಯ ತೀಯಾ ಸಮಾಜದ ಕೇಂದ್ರ ಸಮಿತಿ ಸದಸ್ಯರಾಗಿದ್ದ ಅವರು ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿ ಸಾಮಾಜಿಕ ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಶಾಸಕ ಯು.ಟಿ. ಖಾದರ್, ಮಿಥುನ್ ರೈ, ಭಾರತೀಯತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಕ್ಷೇತ್ರದ ಮೊಕ್ತೇಸರ ಸುರೇಶ್ ಭಟ್ನಗರ, ತೀಯಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ಉಳ್ಳಾಲ್ ಹಾಗೂ ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ದಿನೇಶ್ ಕುಂಪಲ ಸಂತಾಪ ಸೂಚಿಸಿದ್ದಾರೆ.