ಶಿರಾಡಿ ಘಾಟ್: ಇಂದು ಸಂಜೆ 6ರ ತನಕ ವಾಹನ ಸಂಚಾರಕ್ಕೆ ಮುಕ್ತ
ಮಂಗಳೂರು: ಭಾರೀ ಮಳೆ, ಭೂ ಕುಸಿತದಿಂದ ಬಂದ್ ಆಗಿದ್ದ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದು ಸಂಜೆ 6ರ ತನಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ದೋಣಿಗಾಲ್ ಚೆಕ್ಪೋಸ್ಟ್ನಿಂದ ಸಂಜೆ 6ರ ನಂತರ ವಾಹನ ಸಂಚಾರ ನಿರ್ಬಂಧಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯಿಂದ ಹಲವು ಕಡೆ ಭೂಕುಸಿತ, ಗುಡ್ಡ ಕುಸಿತವಾಗಿದ್ದು, ತಾತ್ಕಾಲಿಕ ದುರಸ್ತಿ ಕಾರ್ಯ ನಡೆಯುತ್ತಿದೆ.
Next Story