ಬಂಟ್ವಾಳದ ಸಂತ್ರಸ್ತರಿಗೆ ಕಿಟ್ ವಿತರಣೆ
ಬಂಟ್ವಾಳ : ಪಾಕೃತಿಕ ವಿಕೋಪದಡಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾದ ಸುಮಾರು 315 ಸಂತ್ರಸ್ತರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಕಿಟ್ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಮುಖ್ಯ ಮಂತ್ರಿ ಅವರು ನೆರೆಯಿಂದ ಹಾನಿಯಾದ ಪ್ರತಿಯೊಂದು ಮನೆಗಳಿಗೆ 10 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದು, ಶೀಘ್ರವಾಗಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಹೇಳಿದರು.
ಸಮಯಕ್ಕೆ ಸರಿಯಾಗಿ ಜನರ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಅಧಿಕಾರಿಗಳ ಸಹಕಾರದಿಂದ ಬಂಟ್ವಾಳ ತಾಲೂಕಿನ ಯಾವುದೇ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ ಎಂದು ಅವರು ಹೇಳಿದರು. ಪಾಣೆಮಂಗಳೂರು ಹೋಬಳಿಯ 130, ಬಿ.ಕಸ್ಬಾ ಗ್ರಾಮದ 93 ಹಾಗೂ ಬಿಮೂಡ ಗ್ರಾಮದ 92 ಜನ ಸಂತ್ರಸ್ತರಿಗೆ ಕಿಟ್ ವಿತರಣೆ ನೀಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್, ಅಹಾರ ಶಾಖೆಯ ಉಪತಹಶೀಲ್ದಾರ್ ವಾಸುಶೆಟ್ಟಿ, ತಾಲೂಕು ಉಪ ತಹಶೀಲ್ದಾರ್ ರಾಜೇಶ್ ನಾಯಕ್, ಆಹಾರ ಶಾಖೆಯ ಶ್ರೀನಿವಾಸ್, ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಪಕಳ, ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ ಬೆಂಜನ ಪದವು, ದಿವಾಕರ ಮುಗುಳಿಯ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಟೆಕಾರ್, ರಾಜು ಲಂಬಾಣಿ, ವಿಜೇತ ಮತ್ತಿತರರು ಉಪಸ್ಥಿತರಿದ್ದರು.