ಉಡುಪಿ: ತಾಯಿ ಓದಲು ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಬೈಂದೂರು, ಆ.15 : ಓದಲು ಹೇಳಿದಕ್ಕೆ ಮನನೊಂದ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ನಡೆದಿದೆ.
ಮೃತರನ್ನು ಅಳ್ವೆಗದ್ದೆ ನಿವಾಸಿ ಪದ್ಮಾವತಿ ಎಂಬವರ ಮಗಳು ಶ್ರುತಿ (19) ಎಂದು ಗುರುತಿಸಲಾಗಿದೆ.
ಭಟ್ಕಳದ ಕಾಲೇಜಿನಲ್ಲಿ ಬಿ.ಕಾಂ ವಿದ್ಯಾಬ್ಯಾಸ ಮಾಡುತ್ತಿದ್ದ ಶ್ರುತಿ ಕಲಿಕೆಯಲ್ಲಿ ಸ್ವಲ್ಪ ಹಿಂದೆ ಇದ್ದು, ಆಕೆಯ ತಾಯಿ ಆಕೆಗೆ ಪದೇ ಪದೇ ಓದಲು ಹೇಳುತ್ತಿದ್ದರೆನ್ನಲಾಗಿದೆ. ಇದೇ ವಿಚಾರದಲ್ಲಿ ಮನನೊಂದ ಆಕೆ ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story