ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಕಾರ್ಕಳ, ಆ.16: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುಡಾರು ಗ್ರಾಮದ ಬಜಗೊಳಿ ಪ್ರಾಥಮಿಕ ಶಾಲೆಯ ಮುಂಭಾಗ ಕಾರ್ಕಳ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಆ.16ರಂದು ಮಧ್ಯಾಹ್ನ 3ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ನಲ್ಲೂರು ನೆಲ್ಲಿಕಾರು ನಿವಾಸಿ ಜಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ನಲ್ಲೂರು ಕಡೆಯಿಂದ ಬಜಗೊಳಿ ಕಡೆಗೆ ಹೋಗುತ್ತಿದ್ದ ಮಾರುತಿ ಆಲ್ಟೋ ಕಾರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಜಯಾನಂದ ಪೂಜಾರಿ ಹಾಗೂ ರಘುರಾಮ ಆಚಾರಿ ಎಂಬವರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಜಯಾನಂದ ಪೂಜಾರಿ ಸ್ಥಳ ದಲ್ಲೇ ಮೃತಪಟ್ಟಿದ್ದು, ರಘುರಾಮ ಆಚಾರಿ ತೀವ್ರ ಸ್ವರೂಪದ ಗಾಯಗೊಂಡು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story