ಮನುಷ್ಯನ ಬೇಡಿಕೆ ಹೆಚ್ಚಳದಿಂದ ಪರಿಸರ ನಾಶ: ಡಾ.ರಾಮಕೃಷ್ಣ ಹೆಗಡೆ
ಬ್ರಹ್ಮಾವರದಲ್ಲಿ ಅರಣ್ಯ ಕೃಷಿ ತರಬೇತಿ ಕಾರ್ಯಕ್ರಮ
ಬ್ರಹ್ಮಾವರ, ಆ.17:ಮನುಷ್ಯನ ಬೇಡಿಕೆಗಳು ದಿನೇ ದಿನೇ ಹೆಚ್ಚುತ್ತಿರುವು ದರಿಂದ ನಮ್ಮ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ನಮ್ಮ ಈಗಿನ ಯುವಕರು ಕೃಷಿ ಬಗ್ಗೆ ಆಸಕ್ತಿಯನ್ನೇ ಕಳೆದುಕೊಳ್ಳುತಿದ್ದಾರೆ ಎಂದು ಕೊಡಗು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಾ.ರಾಮಕೃಷ್ಣ ಹೆಗಡೆ ಹೇಳಿದ್ದಾರೆ.
ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರರದಲ್ಲಿ ಶುಕ್ರವಾರ ಕೆ.ಎಂ.ಉಡುಪ ಸ್ಮರಣಾರ್ಥ ನಡೆದ ಅರಣ್ಯ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಅರಣ್ಯದಲ್ಲಿ ಕೃಷಿ ಮಾಡಬಹುದಾ ಅಥವಾ ಕೃಷಿ ಭೂಮಿಯಲ್ಲಿ ಅರಣ್ಯ ವೃಕ್ಷಗಳನ್ನು ಬೆಳೆಸಬಹುದಾ ಎಂಬುರ ಕುರಿತೂ ಅವರು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ವಿಸ್ತರಣಾ ಮತ್ತು ಸಹ ಸಂಶೋಧನಾ ನಿರ್ದೇಶಕ ಡಾ. ಎಸ್.ಯು. ಪಾಟೀಲ್ ಮಾತನಾಡಿ, ಅರಣ್ಯ ನಾಶದಿಂದ ಕಾಡು ಪ್ರಾಣಿಗಳಿಗೂ ಆಹಾರ ಕೊರತೆಯಾಗಿದೆ. ಮನುಷ್ಯನು ಕಾಡನ್ನು ನಾಶ ಮಾಡಿರುವುದರಿಂದ ಕಾಡುಪ್ರಾಣಿಗಳು ನಾಡಿಗೆ ಬಂದು ವಾಸಿಸಲು ಪ್ರಾರಂಭಿಸಿದವು. ಆದರೆ ಅರಣ್ಯ ಕೃಷಿ ಬಗ್ಗೆ ವಿಷಯವನ್ನು ಮನನ ಮಾಡಿಕೊಂಡು ಅರಣ್ಯ ಬೆಳೆಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಣಿಪಾಲ ಭಾರತೀಯ ವಿಕಾಸ್ ಟ್ರಸ್ಟ್ನ ಆಡಳಿತ ಅಧಿಕಾರಿ ಐ.ಜಿ.ಕಿಣಿ, ಬ್ರಹ್ಮಾವರ ಕೃಷಿ ಡಿಪ್ಲೋಮ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಸುಧೀರ ಕಾಮತ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಡುಪಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ರವೀಂದ್ರ ಪಿ. ಆಚಾರ್ಯ ಉಪಸ್ಥಿತರಿದ್ದರು.
ಬ್ರಹ್ಮಾವರ ಕೆವಿಕೆಯ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಬಿ.ಧನಂಜಯ ಪ್ರಾಸ್ತಾವಿಕ ವಾಗಿ ಮಾತನಾಡಿ, ಸ್ವಾಗತಿಸಿದರು. ಕೆವಿಕೆಯ ವಿಜ್ಞಾನಿ(ಬೇಸಾಯ ಶಾಸ್ತ್ರ) ಡಾ. ಎನ್.ಈ.ನವೀನ್ ಕಾರ್ಯಕ್ರಮ ನಿರೂಪಿಸಿ ಮತ್ತೊಬ್ಬ ವಿಜ್ಞಾನಿ ಚೈತನ್ಯ ಹೆಚ್. ಎಸ್. ವಂದಿಸಿದರು.