ಉಡುಪಿ: ಡಾ.ಮುದ್ದುಮೋಹನ್ರಿಂದ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ
ಉಡುಪಿ, ಆ.17:ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರ್ಯಾಯ ಶ್ರೀ ಪಲಿಮಾರು ಮಠದ ಸಹಯೋಗದಲ್ಲಿ ಆ.22ರ ರಾತ್ರಿ 7 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಮುದ್ದುಮೋಹನ್ ಇವರಿಂದ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಡಾ. ಮುದ್ದುಮೋಹನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿ, ವಾರ್ತಾ ಇಲಾಖೆಯ ನಿರ್ದೇಶಕರಾಗಿ ಹಾಗೂ ಉಡುಪಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ರಾಜ್ಯದ ಪ್ರಮುಖ ಹಿಂದೂಸ್ತಾನಿ ಗಾಯಕರಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನೀಡಿದ್ದಾರೆ.
Next Story