ಸಿಬಿಐ ಅಲ್ಲ, ಟ್ರಂಪ್ ಸಹಾಯ ಪಡೆದು ಅಂತರ್ ರಾಷ್ಟ್ರೀಯ ಏಜನ್ಸಿಯಲ್ಲೇ ತನಿಖೆ ಮಾಡಲಿ: ಕುಮಾರಸ್ವಾಮಿ
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಮಾಜಿ ಸಿಎಂ
ಮಂಗಳೂರು : ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು "ಸಿಬಿಐ ಅಲ್ಲ, ಟ್ರಂಪ್ ಸಹಾಯ ಪಡೆದು ಅಂತರ್ ರಾಷ್ಟ್ರೀಯ ಏಜನ್ಸಿಯಲ್ಲೇ ತನಿಖೆ ಮಾಡಲಿ" ಎಂದು ಹೇಳಿದರು.
ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದರೊಂದಿಗೆ ಮಾತನಾಡಿ ಈ ಬಗ್ಗೆ ಹೇಳಿಕೆ ನೀಡಿದರು.
"ಜೆಡಿಎಸ್ ಪಕ್ಷ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಫೋನ್ ಕದ್ದಾಲಿಕೆ ವಿಚಾರದಲ್ಲಿ ಇಲೆಕ್ಟ್ರಾನಿಕ್ ಮೀಡಿಯಾಗಳು ನನ್ನನ್ನು ಎಳೆದು ತರಲು ಯತ್ನಿಸುತ್ತಿದೆ. ನನ್ನ ಮತ್ತು ಜನತೆಯ ನಡುವೆ ಅವಿಶ್ವಾಸ ಮೂಡಿಸಲು ಯತ್ನಿಸುತ್ತಿದೆ. ನಾನು ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ಮೀಡಿಯಾಗಳ ಒತ್ತಡಕ್ಕೆ ಬಗ್ಗಲ್ಲ. ಮಾಧ್ಯಮಗಳು ಫೋನ್ ಕದ್ದಾಲಿಕೆ ಸ್ಟೋರಿ ಮಾಡಿ ಬಿಲ್ಡಪ್ ತಗಳೋ ಪ್ರಯತ್ನದಲ್ಲಿವೆ" ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
Next Story