ಬಂಟ್ವಾಳ: ನೆರೆ ಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ನಿಯೋಗ ಭೇಟಿ
ಬಂಟ್ವಾಳ,ಆ.19: ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಸೋಮವಾರ ಕೆಪಿಸಿಸಿ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದ ನಿಯೋಗವು ತಾಲೂಕಿನ ಸರಪಾಡಿ, ಕರಿಯಂಗಳ, ಅಜಿಲಮೊಗರು ಸಹಿತ ವಿವಿಧ ಪ್ರದೇಶಗಳಿಗೆ ಭೇಟಿ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿತು. ಬಳಿಕ ಸರಪಾಡಿ ಗ್ರಾಮದ ರಾಮ ಮೂಲ್ಯ ಹಾಗೂ ಕರಿಯಂಗಳ ಗ್ರಾಮದ ಪಲ್ಲಿಪಾಡಿ ನಿವಾಸಿ ಪೂವಪ್ಪ ಪೂಜಾರಿ ಎಂಬವರ ಮನೆಗಳಿಗೆ ಭೇಟಿ ನೀಡಿತು.
ಈ ಸಂದರ್ಭದಲ್ಲಿ ಶಾಸಕ ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್, ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮುಹಮ್ಮದ್, ತಾಲೂಕ್ ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಸಪ್ನಾ ವಿಶ್ವನಾಥ್, ಪ್ರಮುಖರಾದ ಮಾಯಿಲಪ್ಪ ಸಾಲ್ಯಾನ್, ಇದಿನಬ್ಬ, ಪದ್ಮನಾಭ ರೈ, ಉಮೇಶ್ ಕರಿಯಂಗಳ, ಚಂದ್ರಹಾಸ ಪಲ್ಲಿಪಾಡಿ, ವಿನ್ಸೆಂಟ್ ಪಿಂಟೋ, ಬಾಲ ಕೃಷ್ಣ ಪೂಜಾರಿ, ಮಿಥುನ್ ಸಿಕ್ವೇರಾ ಹಾಜರಿದ್ದರು.