ಆ.29: ಮಂಜುನಾಥ ಉದ್ಯಾವರ ಸಂಸ್ಮರಣೆ
ಉದ್ಯಾವರ, ಆ.24: ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರದ ದಿ.ಮಂಜುನಾಥ ಉದ್ಯಾವರ್ ಅವರ ಏಳನೇ ವರ್ಷದ ಸಂಸ್ಮರಣಾ ಕಾರ್ಯಕ್ರಮ ಆ.29ರ ಗುರುವಾರ ಸಂಜೆ 5:00 ಕ್ಕೆ ಉದ್ಯಾವರ ಶ್ರೀವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಉಡುಪಿ ಧರ್ಮಗುರುಗಳಾದ ವಂ. ವಿಲಿಯಂ ಮಾರ್ಟಿಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರದ ನ್ಯಾಯವಾದಿ ಶ್ಯಾಮಲಾ ಭಂಡಾರಿ ಮತ್ತು ಉಡುಪಿ ಜಿಪಂನ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದೂಷಿ ಮಂಜುಳಾ ಸುಬ್ರಹ್ಮಣ್ಯ ಇವರಿಂದ ಏಕವ್ಯಕ್ತಿ ರಂಗ ಪ್ರಯೋಗ ರಾಧಾ( ನಿರ್ದೇಶನ ಡಾ.ಶ್ರೀಪಾದ್ ಭಟ್, ರಚನೆ: ಸುಧಾ ಆಡುಕಳ) ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ತಿಲಕ್ರಾಜ್ ಸಾಲ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story