ಪೀರಿಯಾಡಿಕ್ ಟೇಬಲ್ನ ಅಂತಾರಾಷ್ಟ್ರೀಯ ವರ್ಷಾಚರಣೆ
ಉಡುಪಿ, ಆ.25: ಅಜ್ಜರಕಾಡು ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಪೀರಿಯಾಡಿಕ್ ಟೇಬಲ್ನ ಅಂತಾರಾಷ್ಟ್ರೀಯ ವರ್ಷಾಚರಣೆ ಕಾರ್ಯಕ್ರಮ ವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಪ್ರೊ.ಬಿ.ಎಸ್.ಶೇರಿಗಾರ್ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಭಾ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವಿಜ್ಞಾನ ನಿಕಾಯದ ಡೀನ್ ರಾಮಚಂದ್ರ ಅಡಿಗ ಜಿ. ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕ ರಮಾಕಾಂತ ಪುರಾಣಿಕ ಎಚ್. ವಂದಿಸಿದರು. ವಿದ್ಯಾರ್ಥಿನಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.
Next Story