ಕಾಸರಗೋಡು : ಬೈಕ್ - ಕಾರು ನಡುವೆ ಢಿಕ್ಕಿ; ಬ್ಯಾಂಕ್ ಮ್ಯಾನೇಜರ್ ಮೃತ್ಯು
ಕಾಸರಗೋಡು : ಬೈಕ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ ಮೃತಪಟ್ಟ ಘಟನೆ ಚೆರ್ವತ್ತೂರು ಪಿಲಿಕ್ಕೋಡ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕಾಸರಗೋಡು ನಗರ ಹೊರವಲಯದ ಕೂಡ್ಲುವಿನ ಕೆ. ಗಿರೀಶ್ ಕುಮಾರ್ (46) ಎಂದು ಗುರುತಿಸಲಾಗಿದೆ .
ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಣ್ಣೂರು ಶಾಖೆಯ ಮುಖ್ಯ ಪ್ರಬಂಧಕರಾಗಿದ್ದರು.
ಬೆಳಗ್ಗೆ ಬುಲೆಟ್ ಬೈಕ್ ನಲ್ಲಿ ತೆರಳುತ್ತಿದ್ದಾಗಅಪಘಾತ ನಡೆದಿದೆ. ರಸ್ತೆಯಲ್ಲಿನ ಹೊಂಡಗಳನ್ನು ತಪ್ಪಿಸುವ ಭರದಲ್ಲಿ ಅಪಘಾತ ನಡೆದಿದ್ದು, ಅಪಘಾತಕ್ಕೆ ಕಾರಣ ವಾದ ಕಾರು ನಿಲ್ಲಿಸದೆ ಪರಾರಿಯಾಗಿದೆ.
ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story