ಪುತ್ತೂರು: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಹತ್ಯೆ
ಪುತ್ತೂರು : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಸಂಪ್ಯದಲ್ಲಿ ನಡೆದಿದೆ.
ಹಿಂಜಾವೇ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ (30) ಮೃತರು ಎಂದು ಗುರುತಿಸಲಾಗಿದೆ.
ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕಾರ್ತಿಕ್ ರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕಾರ್ತಿಕ್ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣವನ್ನು ಪಡೆದಿದ್ದರು ಎಂದು ತಿಳಿದುಬಂದಿದ್ದು, ಈ ವಿಚಾರಕ್ಕೆ ಕೆಲ ಯುವಕರು ಕಾರ್ತಿಕ್ ಜೊತೆ ಜಗಳಕ್ಕಿಳಿದು, ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿ ಯುವಕರ ಗುಂಪು ಕಾರ್ತಿಕ್ಗೆ ಚೂರಿಯಿಂದ ಇರಿದು ಕೊಲೆ ಮಾಡಿದೆ.
ಸಂಪ್ಯದ ಚರಣ್ರಾಜ್, ಕಿರಣ್ ಮತ್ತು ಪ್ರೀತೇಶ್ ಕೊಲೆ ಆರೋಪಿಗಳು ಎಂದು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story