ಸೆ.8ಕ್ಕೆ ಉದ್ಯಾವರದಲ್ಲಿ ರಕ್ತದಾನ ಶಿಬಿರ
ಉದ್ಯಾವರ, ಸೆ. 4: ಸ್ಥಳೀಯ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ 7ನೇ ವರ್ಷದ ಮಂಜುನಾಥ ಉದ್ಯಾವರ ಸಂಸ್ಮರಣೆಯ ಅಂಗವಾಗಿ ಸೆ.8ರ ರವಿವಾರ ಬೆಳಗ್ಗೆ 9:30ರಿಂದ ಅಪರಾಹ್ನ 1 ರವರೆಗೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗೊಂದಿಗೆ ರಕ್ತದಾನ ಶಿಬಿರ ಜರಗಲಿದೆ.
ರಕ್ತದಾನ ಶಿಬಿರದ ಉದ್ಘಾಟನೆಯನ್ನು ಉಡುಪಿ ಜಿಪಂನ ಮಾಜಿ ಅಧ್ಯಕ್ಷೆ ಸರಸು ಡಿ. ಬಂಗೇರ ನೆರವೇರಿಸುವರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಮಹಾಬಲ ಕುಂದರ್ ವಹಿಸಲಿರುವರು ಎಂದು ಸಂಸ್ಥೆಯ ಅಧ್ಯಕ್ಷ ತಿಲಕ್ರಾಜ್ ಸಾಲ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story