ರಸ್ತೆ ಅಪಘಾತ: ಬಸ್ ಚಾಲಕ ದೋಷಮುಕ್ತಿ
ಕುಂದಾಪುರ, ಸೆ.13: ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಮ್ಯಾಜಿಸ್ಟೇಟ್ ಕೋರ್ಟಿನಲ್ಲಿ ಆರು ತಿಂಗಳ ಕಾಲ ಶಿಕ್ಷೆಗೆ ಒಳಗಾಗಿದ್ದ ಬಸ್ ಚಾಲಕನನ್ನು ಕುಂದಾಪುರ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ದೋಷಮುಕ್ತ ಗೊಳಿಸಿ ಆದೇಶ ನೀಡಿದೆ.
2009ರ ಎ.16ರಂದು ರಾಧಾರಮಣ ಬಸ್ಸಿನ ಚಾಲಕ ವಿ.ಗೋಪಾಲ್ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದ ಬಳಿ ಯಾವುದೇ ಸೂಚನೆ ನೀಡದೆ ಒಮ್ಮೇಲೆ ನಿಲ್ಲಿಸಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರ ನಾಡ ಗ್ರಾಮದ ರಾಘವ ಆಚಾರ್ಯ ಬಸ್ಸಿಗೆ ಢಿಕ್ಕಿ ಹೊಡೆದು ಮೃತಪಟ್ಟಿದ್ದರು.
ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಹೇಳಿ ಶಿಕ್ಷೆ ವಿಧಿಸಿತ್ತು. ಈ ಬಗ್ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಸತ್ರ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತ ಗೊಳಿಸಿ ಆದೇಶ ನೀಡಿದೆ. ಆರೋಪಿ ಪರವಾಗಿ ಕುಂದಾಪುರ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು.
Next Story