ಮಾರಿಪಳ್ಳ: ಕಂಟೈನರ್ ಲಾರಿ - ಪಿಕಪ್ ನಡುವೆ ಅಪಘಾತ; ಓರ್ವನಿಗೆ ಗಾಯ
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ ಹಾಗೂ ತ್ಯಾಜ್ಯ ಸಾಗಾಟದ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಬೆಂಗಳೂರು-ಮಂಗಳೂರು ರಾಷ್ತ್ರೀಯ ಹೆದ್ದಾರಿಯ ಮಾರಿಪಳ್ಳ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.
ಕಂಟೈನರ್ ಲಾರಿಯ ಚಾಲಕ ಶಿವಾನಂದ ವಾಮಂಜೂರು ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಂದು ಸಂಜೆ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕ್ಕೇರಿದೆ. ಬಳಿಕ ಮುಂದಕ್ಕೆ ಚಲಿಸಿದ ಲಾರಿಯು ಇನ್ನೊಂದು ರಸ್ತೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ತ್ಯಾಜ್ಯ ಸಾಗಾಟದ ಪಿಕಪ್ ವಾಹನಕ್ಕೆ ಢಿಕ್ಕಿಯಾಗಿ, ರಸ್ತೆಯ ಚರಂಡಿಗೆ ಸಿಲುಕಿದೆ. ಘಟನೆಯಿಂದ ಲಾರಿ ಚಾಲಕನಿಗೆ ಗಾಯ ವಾಗಿದ್ದು, ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
Next Story