ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
ಮಂಗಳೂರು, ಸೆ.17: ಜಿಲ್ಲಾಡಳಿತದ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆಯುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಗೊಂಡಿತು.
ವಿಧಾನ ಪರಿಷತ್ನ ಸದಸ್ಯ ಐವನ್ ಡಿಸೋಜಾ ಉದ್ಘಾಟನೆ ನೆರವೇರಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಬೇರೆ ಇಲಾಖೆಗಳಿಗೆ ಹೋಲಿಸಿದರೆ ಕ್ರೀಡಾ ಇಲಾಖೆಗೆ ಸಿಗುವ ಸವಲತ್ತುಗಳು ಕಡಿಮೆ. ಜಿಲ್ಲೆ ಇತರ ಹಲವು ಕ್ಷೇತ್ರಗಳಲ್ಲಿ ಮುಂದಿದ್ದು, ಕ್ರೀಡಾ ಕ್ಷೇತ್ರದಲ್ಲಿಯೂ ಹೆಚ್ಚಿನ ಪ್ರಗತಿ ಸಾಧಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಬಗ್ಗೆ ನಾನು ವಿಧಾನ ಪರಿಷತ್ನಲ್ಲಿ ಚರ್ಚಿಸಿದ್ದೇನೆ ಎಂದು ಐವನ್ ಡಿಸೋಜಾ ಹೇಳಿದರು.
ಜಿಲ್ಲಾ ಕಬಡ್ಡಿ ಅಸೋಸಿಯೇಶನ್ನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕ್ರೀಡಾಧಿಕಾರಿ ಲಿಲ್ಲಿ ಪಾಯಸ್, ಬಂಟ್ವಾಳ ಕ್ರೀಡಾಧಿಕಾರಿ ನವೀನ್ ಕುಮಾರ್, ಪುತ್ತೂರಿನ ಮಾಮಚ್ಚನ್, ಬೆಳ್ತಂಗಡಿಯ ಪ್ರಭಾಕರ್, ಸುಳ್ಯದ ದೇವದಾಸ್ ಮುತ್ಲಾಜೆ ಉಪಸ್ಥಿತರಿದ್ದರು.
ವಿನ್ಸೆಂಟ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.