ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಆಚರಣೆ
ಮಂಗಳೂರು, ಸೆ.17: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಇತ್ತೀಚೆಗೆ ಓಣಂ ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭ ಓಣಂ ಹಬ್ಬದ ಕುರಿತಂತೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಕ್ ಮಾತನಾಡಿ, ಭಾರತವು ವಿವಿಧತೆಯ ಸಂಸ್ಕೃತಿಯನ್ನು ಪಸರಿಸುವ ದೇಶ. ದೇಶವು ಪ್ರಾಂತ, ಮತ, ಭೇದವನ್ನು ಮೆಟ್ಟಿ ನಿಂತಿರುವ ದೇಶ. ಓಣಂ ಎಲ್ಲರಿಗೂ ಶುಭ ತರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿ ಅಧಿಕಾರಿ ನಸೀಮಾಬಾನು, ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಅಧ್ಯಾಪಕರು ಹಾಗೂ ಇತರರು ಉಪಸ್ಥಿತರಿದ್ದರು.
Next Story