ಕೋಟ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು
ಕೋಟ, ಸೆ.18: ಬಿಲ್ಲಾಡಿ ಗ್ರಾಮದ ಅರಾಡಿ ಕಲ್ಮಕ್ಕಿ ತೋಡಿನ ಬಳಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಸೆ.16ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬಿಲ್ಲಾಡಿ ಗ್ರಾಮದ ಜಾನುವಾರುಕಟ್ಟೆ ಆರಾಡಿ ನಿವಾಸಿ ನರಸಿಂಹ ನಾಯ್ಕ್ (58) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ತೋಡಿಗೆ ಮೀನು ಹಿಡಿಯಲು ಹೋದವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story