ಮಂಗಳೂರು ವಿಶೇಷ ಆರ್ಥಿಕ ವಲಯದಿಂದ ಕಳವು: ಇಬ್ಬರು ಆರೋಪಿಗಳ ಬಂಧನ
ಬಜ್ಪೆ, ಸೆ.18: ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಜ್ಪೆ ಶಾಂತಿಗುಡ್ಡೆ ನಿವಾಸಿಗಳಾದ ವಿಜಯ (35) ಹಾಗೂ ಪುನೀತ್(28) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 80,000 ರೂ. ಮೌಲ್ಯದ 278 ಕೇಬಲ್ ಗ್ಲಾಂಡ್ ಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಪಿಕ್ ಅಪ್ ವಾಹನವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಜ್ಪೆ ಠಾಣಾ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯಕ್, ಪಿ.ಎಸ್ಸೈಗಳಾದ ಸತೀಶ್ ಎಂ.ಪಿ., ಕಮಲಾ, ಸಹಾಯಕ ಉಪನಿರೀಕ್ಷಕ ರಾಮ ಪೂಜಾರಿ, ಎಚ್.ಸಿ.ಗಳಾದ ಚಂದ್ರಮೋಹನ್, ರಾಜೇಶ್, ಸುಧೀರ್ ಶೆಟ್ಟಿ, ಸಂತೋಷ್ ಸುಳ್ಯ, ಪಿಸಿಗಳಾದ ಮಂಜುನಾಥ, ವಕೀಲ ಲಮಾಣಿ, ಮೋಹನ್ ಭಾಗವಹಿಸಿದ್ದರು.
Next Story