ಗಾಂಜಾ ಸೇವನೆ: ಆರೋಪಿ ಬಂಧನ
ಮಂಗಳೂರು, ಸೆ.18: ನಗರದ ಹೊರವಲಯದ ಜಪ್ಪಿನಮೊಗರು ಸಮೀಪ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಸ್ಥಳೀಯ ನಿವಾಸಿ ಕೀರ್ತನ್ ಶೆಟ್ಟಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರ್ಥಿಕ ಹಾಗೂ ಮಾದಕ ಸೊತ್ತು ಪತ್ತೆ ಠಾಣೆಯ ಪಿಎಸ್ಸೈ ಲತಾ ಕೆ.ಎನ್. ಸಿಬ್ಬಂದಿ ಜತೆ ಕಾರ್ಯಾಚರಣೆಯಲ್ಲಿದ್ದಾಗ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿ ಅಮಲಿನ ನಶೆಯಲ್ಲಿದ್ದು, ಆತನನ್ನು ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story