ಗುಂಡ್ಯ ಬಳಿ ಅಪಘಾತ: ಕಾರು ಚಾಲಕ ಮೃತ್ಯು
ನೆಲ್ಯಾಡಿ: ಬೆಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪ ಗುರುವಾರ ನಡೆದಿದೆ.
ಮೃತರನ್ನು ಬೆಂಗಳೂರು ಜಾಲಹಳ್ಳಿ ನಿವಾಸಿ ನಾಗರಾಜ್ (60) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಬೆಂಗಳೂರು ಜಾಲಹಳ್ಳಿ ನಿವಾಸಿ ಹನುಮಂತ (26) ಎಂಬವರು ಗಾಯಗೊಂಡಿದ್ದಾರೆ. ನಾಗರಾಜ್ ಬೆಂಗಳೂರಿನಿಂದ ತನ್ನ ಕಾರಿನಲ್ಲಿ ಪುತ್ತೂರಿಗೆ ಹೋಗುತ್ತಿದ್ದ ವೇಳೆ ಶಿರಾಡಿ ಘಾಟಿ ಗುಂಡ್ಯ ಗಡಿಯ ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪದ ಮೋರಿಯೊಂದಕ್ಕೆ ಢಿಕ್ಕಿಯಾಗಿದೆ. ಘಟನೆಯಲ್ಲಿ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹನುಮಂತ ಗಾಯಗೊಂಡಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story