ಕುಂದಾಪುರ ಎಸಿ ಡಾ. ಮಧುಕೇಶ್ವರ್ ವಸತಿಗೃಹದ ಮೇಲೆ ಎಸಿಬಿ ದಾಳಿ
ಉಡುಪಿ, ಸೆ.19: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಡಾ. ಎಸ್.ಎಸ್.ಮಧುಕೇಶ್ವರ್ ಮನೆ ಹಾಗೂ ಕಚೇರಿಗಳ ಮೇಲೆ ಉಡುಪಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಇಂದು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ಕುಂದಾಪುರ ಮಿನಿ ವಿಧಾನಸೌಧದ ಬಳಿ ಇರುವ ಎಸಿ ಕಚೇರಿ ಸಮೀಪದಲ್ಲೇ ಇರುವ ಇವರ ವಸತಿಗೃಹಕ್ಕೆ ಮಧ್ಯಾಹ್ನ ವೇಳೆ ದಾಳಿ ನಡೆಸಿರುವ ಉಡುಪಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದ ತಂಡ ಕಡತಗಳನ್ನು ಪರಿಶೀಲನೆ ನಡೆಸುತ್ತಿದೆ. ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯಾಗಿರುವ ಡಾ. ಮಧುಕೇಶ್ವರ್ ಎರಡು ದಿನಗಳ ಹಿಂದೆ ವರ್ಗಾವಣೆಗೊಂಡಿದ್ದರೂ ವಸತಿಗೃಹ ಬಿಟ್ಟು ಹೋಗದೆ ಅಲ್ಲೇ ಕಡತಗಳ ಪರಿಶೀಲನೆ ನಡೆಸುತ್ತಿದ್ದರೆನ್ನಲಾಗಿದೆ. ಈ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Next Story