ಜೀಪು ಢಿಕ್ಕಿ: ಬೈಕ್ ಸವಾರ ಮೃತ್ಯು
ಶಂಕರನಾರಾಯಣ, ಸೆ.19: ಬೋಲೆರೋ ಜೀಪೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣದ ಕಲ್ಲುಹೊಳೆ ಎಂಬಲ್ಲಿ ಸೆ.18ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಚಂದ್ರಶೇಖರ ದೇವಾಡಿಗ ಎಂದು ಗುರುತಿಸ ಲಾಗಿದೆ. ಕೊಂಡಳ್ಳಿ ಕಡೆಯಿಂದ ಅಂಪಾರು ಕಡೆಗೆ ಹೋಗುತ್ತಿದ್ದ ಬೈಕಿಗೆ ಶಂಕರ ನಾರಾಯಣ ಕಡೆಯಿಂದ ಬರುತ್ತಿದ್ದ ಬೋಲೆರೋ ಜೀಪ್ ಢಿಕ್ಕಿ ಹೊಡೆಯಿತ್ತೆ ನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಂದ್ರ ಶೇಖರ್ ಸೆ.19ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story