ದ.ಕ. ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದ 15ರವರೆಗೆ ದಸರಾ ರಜೆ
ದಿನ ಬದಲಾವಣೆಗೆ ಮನವಿ ಮಾಡಿದ್ದ ಶಾಸಕ ವೇದವ್ಯಾಸ ಕಾಮತ್
ಮಂಗಳೂರು, ಸೆ.20: ದ.ಕ. ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15ರತನಕ ನೀಡಲು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ಕುಮಾರ್ ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಅಕ್ಟೋಬರ್ 1ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ರಜೆ ಘೋಷಣೆ: ಡಿಡಿಪಿಐ
ನಾಡಹಬ್ಬ ದಸರಾ ಪ್ರಯುಕ್ತ ಶಾಲೆಗಳಿಗೆ ಈ ಮೊದಲು ಅ.6ರಿಂದ 20ರವರೆಗೆ ರಜೆ ಘೋಷಿಸಲು ಉದ್ದೇಶಿಸಲಾಗಿತ್ತು. ಅದನ್ನು ಮಾರ್ಪಡಿಸಿ ಅ.1ರಿಂದ 15ರವರೆಗೆ ರಜೆ ಘೋಷಿಸಲಾಗಿದೆ. ಆದೇಶದ ಪ್ರತಿ ತಲುಪಿದೆ. ಅ.16ರಿಂದ ತರಗತಿಗಳು ಆರಂಭವಾಗಲಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಶಿವರಾಮಯ್ಯ ದೃಢಪಡಿಸಿದ್ದಾರೆ.
Next Story