ಕೇಂದ್ರ, ರಾಜ್ಯ ಸಚಿವರು ಮಂಗಳೂರಿಗೆ ಆಗಮಿಸಿದರೆ ಬಹಿಷ್ಕಾರ: ಐವನ್ ಡಿಸೋಜ
ಮಂಗಳೂರು, ಸೆ.22: ಮಳೆಹಾನಿಯಿಂದ ಸಂತ್ರಸ್ತರಾದವರಿಗೆ ಕೇಂದ್ರ ನಯಾ ಪೈಸೆ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಇನ್ನೂ ಒಂದು ತಿಂಗಳು ಬೇಕು ಎನ್ನುತ್ತಾರೆ. ರಾಜ್ಯದ ಸಚಿವರು ಕೂ ಮೀನಮೇಷ ಎಣಿಸುತ್ತಿದ್ದಾರೆ. ಇದನ್ನು ಖಂಡಿಸಿ ಸಚಿವರು ಮಂಗಳೂರಿಗೆ ಬಂದರೆ ಬಹಿಷ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಹೇಳಿದ್ದಾರೆ.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ರವಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸುದ್ದಿಗೋಷ್ಠಿಯಲ್ಲಿ ಮಮತಾ ಗಟ್ಟಿ, ಅಪ್ಪಿ, ನಝೀರ್ ಬಜಾಲ್, ಜಯಶೀಲಾ ಅಡ್ಯಂತಾಯ ಉಪಸ್ಥಿತರಿದ್ದರು.
Next Story