ಮಂಜೇಶ್ವರ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಕಾಸರಗೋಡು, ಸೆ.23: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಅಕ್ಟೊಬರ್ 21ರಂದು ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಸೋಮವಾರ(ಸೆ.23)ದಿಂದ ಆರಂಭಗೊಂಡಿದೆ. ಈ ಬಗ್ಗೆ ಇಂದು ಅಧಿಸೂಚನೆ ಹೊರಡಿಸಲಾಗಿದೆ.
ಇಂದಿನಿಂದ ಸೆ.30ರ ತನಕ ನಾಮಪತ್ರ ಸ್ವೀಕರಿಸಲಾಗುವುದು. ಪೂರ್ವಾಹ್ನ 11ರಿಂದ ಅಪರಾಹ್ನ 3 ಗಂಟೆಯ ತನಕ ಜಿಲ್ಲಾಧಿಕಾರಿ ಕಚೇರಿಯ ಉಪ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ಅಕ್ಟೊಬರ್ ಒಂದರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದೆಗೆಯಲು ಅಕ್ಟೊಬರ್ 3 ಕೊನೆ ದಿನವಾಗಿದೆ.
ಶಾಸಕರಾಗಿದ್ದ ಪಿ.ಬಿ.ಅಬ್ದುರ್ರಝಾಕ್ ಅವರ ನಿಧನದಿಂದ ಕ್ಷೇತ್ರ ತೆರವಾಗಿತ್ತು.
Next Story