ಉಡುಪಿ: ನಾಳೆ ಮೀನುಗಾರರ ಸಾಲಮನ್ನಾ ಕುರಿತು ಸಭೆ
ಉಡುಪಿ, ಸೆ.24: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಈಗಾಗಲೇ ಘೋಷಿಸಿರುವ ಮಹಿಳಾ ಮೀನುಗಾರರ ಸಾಲಮನ್ನಾ ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸೆ.26ರಂದು ಮಧ್ಯಾಹ್ನ 3ಗಂಟೆಗೆ ಉಡುಪಿ ಜಿಲ್ಲಾಧಿಕಾರಿಕಚೇರಿಯಲ್ಲಿ ಸಭೆ ಆಯೋಜಿಸ ಲಾಗಿದೆ.
ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಲೀಡ್ ಬ್ಯಾಂಕಿನ ಪ್ರಬಂಧಕರು ಭಾಗವಹಿಸಲಿದ್ದು ಸಾಲ ಮನ್ನಾ ಯೋಜನೆಯನ್ನು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆಹಾಗೂ ಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story