ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಆರೋಪ: ಯುವಕನ ವಿರುದ್ಧ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಆಗ್ರಹ
ಮಂಗಳೂರು: ನಗರದ ಮಾಲ್ ವೊಂದರಲ್ಲಿ ಚಹಾ ಕುಡಿಯುತ್ತಿದ್ದ ವಿದ್ಯಾರ್ಥಿಗಳನ್ನು ಕೆರಳಿಸಿದ ಬಂಟ್ವಾಳದ ಮಂಜುನಾಥ್ ಎಂಬಾತ 'ಇದು ಹಿಂದೂ ರಾಷ್ಟ್ರ, ಮುಸ್ಲಿಮರು ಇಲ್ಲಿ ಇರಬಾರದು' ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಹೊರಟಿದ್ದು, ಈತನ ಮೇಲೆ ಶೀಘ್ರ ಪ್ರಕರಣ ದಾಖಲಿಸುವಂತೆ ಕ್ಯಾಂಪಸ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಅಲ್ಲದೆ ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ಮಾಡಿ ಅಮಾಯಕ ವಿದ್ಯಾರ್ಥಿಗಳನ್ನು ಬಂಧಿಸದಂತೆ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷ ಮುಹಮ್ಮದ್ ಸಾದಿಕ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Next Story