ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಸಮಿತಿ ಅಸ್ತಿತ್ವಕ್ಕೆ
ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಸಮಿತಿಯು ಶುಕ್ರವಾರ ರಾಜ್ಯ ಉಪಾಧ್ಯಕ್ಷರಾದ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಸುವರ್ಣ ಆರ್ಕೇಡ್'ನಲ್ಲಿ ನಡೆಯಿತು.
ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಎಸ್ ವೈ.ಎಸ್ ರಾಜ್ಯ ಕಾರ್ಯದರ್ಶಿಯಾದ ಡಾ ಎಂಎಸ್ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಪಿ ಕರ್ನಾಟಕ ಮುಸ್ಲಿಂ ಜಮಾಅತ್ ಎನ್ನುವುದು ಉತ್ತಮ ಸಮಾಜದ ಸಬಲೀಕರಣ ಕ್ಕಾಗಿ ರೂಪೀಕೃತವಾಗಿದೆ. ಸಹಬಾಳ್ವೆ ಎಂಬುವುದು ಸಮೃದ್ಧ ಸಮಾಜದ ಅಡಿಗಲ್ಲಾಗಿದೆ ಎಲ್ಲರೂ ಸಮಗಟನೆಯನ್ನು ಬಲಪಡಿಸಲು ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ರಾಜ್ಯ ಉಪಾಧ್ಯಕ್ಷ ಎಚ್.ಐ ಅಬೂಸುಫಿಯಾನ್ ಇಬ್ರಾಹಿಂ ಮದನಿ ಉದ್ಘಾಟಿಸಿದರು. ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಹಾಗೂ ಜಿಲ್ಲಾ ಕೋರ್ಡಿನೇಟರ್ ಅಶ್ರಫ್ ಕಿನಾರ ಶುಭಹಾರೈಸಿದರು. ಅಧ್ಯಕ್ಷರಾದ ಖಾಸಿಂ ಮದನಿ, ಕರಾಯ ದುಃವಾ ಮೂಲಕ ಚಾಲನೆ ನೀಡಿದರು.
ಬೆಳ್ತಂಗಡಿ ತಾಲೂಕು ಸಮಿತಿಯನ್ನು ರಾಜ್ಯ ಉಪಾಧ್ಯಕ್ಷ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್'ಕಟ್ಟೆ ಘೋಷಿಸಿದರು.
ಗೌರವಾಧ್ಯಕ್ಷರಾಗಿ ಅಸ್ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಕಾಜೂರು, ಅಧ್ಯಕ್ಷರಾಗಿ ಸಯ್ಯಿದ್ ಎಸ್.ಎಂ ಕೋಯ ತಂಙಳ್ ಉಜಿರೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಎ. ಕೆ ಅಹ್ಮದ್. ಸಂಘಟನಾ ಕಾರ್ಯದರ್ಶಿಯಾಗಿ ಎಂ.ಬಿ.ಎಂ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಉಪಾಧ್ಯಕ್ಷರುಗಳಾಗಿ ಅಬ್ಬೋನು ಮದ್ದಡ್ಕ, ಬಿ.ಎ ನಝೀರ್ ಬೆಳ್ತಂಗಡಿ, ಅಬ್ದುಲ್ ರಹ್ಮಾನ್ ಅಳಕೆ, ಹಸನಬ್ಬ ಚಾರ್ಮಡಿ, ಕಾರ್ಯದರ್ಶಿಗಳಾಗಿ ಅಲಿಯಬ್ಬ ಪುಲಾಬೆ, ಅಶ್ರಫ್ ಮದ್ದಡ್ಕ, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರ್, ಖಲಂದರ್ ಪದ್ಮುಂಜ, ಮುಹಿಯ್ಯುದ್ದೀನ್ ಉಜಿರೆ, ಹಾಗೂ 33 ಸದಸ್ಯರು ಮತ್ತು 7 ಬ್ಲಾಕ್ ಕೊ-ಆರ್ಡಿನೇಟರ್'ಗಳ ಸಮಿತಿ ರಚಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳ ಅಡಳಿತ ಸಮಿತಿಯ ಪದಾಧಿಕಾರಿಗಳು,ಸಮಾಜ ಸೇವಕರು, ವಿವಿಧ ಸುನ್ನಿ ಕುಟುಂಬದ ನಾಯಕರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಮುಸ್ಲಿಂ ಜಮಾಅತ್ ಜಿಲ್ಲಾ ಕೋರ್ಡಿನೇಟರ್ ಎಂ.ಬಿ.ಎಂ ಸಾದಿಕ್ ಮಾಸ್ಟರ್ ಮಲೆಬೆಟ್ಟು ಸ್ವಾಗತಿಸಿದರು. ಜಿಲ್ಲಾ ನಾಯಕರಾದ ಅಬ್ಬಾಸ್ ಬಟ್ಲಡ್ಕ ವಂದಿಸಿದರು. ಎಂ.ಶರೀಫ್ ಬೆರ್ಕಳ ಕಾರ್ಯಕ್ರಮ ನಿರೂಪಿಸಿದರು.