ಉಡುಪಿ: ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ
ಉಡುಪಿ, ಅ.13: ಉಡುಪಿ ಹಿರಿಯ ನಾಗರಿಕರ ಸಂಸ್ಥೆ ಹಾಗೂ ಪ್ರಸಾದ್ ನೇತ್ರಾಲಯದ ಜಂಟಿ ಆಶ್ರಯದಲ್ಲಿ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಸದಸ್ಯರಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ರವಿವಾರ ಪ್ರಸಾದ್ ನೇತ್ರಾಲಯದಲ್ಲಿ ಏರ್ಪಡಿಸಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿದ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕಷ್ಣಪ್ರಸಾದ್ ಮಾತನಾಡಿ, 60ವರ್ಷ ಪ್ರಾಯದ ಬಳಿಕ ಖಾಯಿಲೆಗಳು ಬರುವುದು ಸಾಮಾನ್ಯ. ನಿರಂತರ ಚಟುವಟಿಕೆ, ವ್ಯಾಯಾಮಗಳಿಂದ ಹಿರಿಯ ನಾಗರಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಹಿರಿಯ ನಾಗರಿಕರು ಆರೋಗ್ಯದ ಚಿಕಿತ್ಸೆಗೆ ಸರಕಾರದ ಆರೋಗ್ಯ ವಿಮೆ ಯನ್ನು ಪಡೆದುಕೊಳ್ಳಬೇಕು. ಆಯುಷ್ಮಾನ್ ಭಾರತ್ ಆರೋಗ್ಯ ವಿಮೆಯಲ್ಲಿ ಕಣ್ಣಿನ ಪೊರೆಚಿಕಿತ್ಸೆಗೂ ಸೌಲಭ್ಯ ಒದಗಿಸಿದರೆ ಹಿರಿಯ ನಾಗರಿಕರಿಗೆ ತುಂಬಾ ಪ್ರಯೋಜನವಾಗುತ್ತದೆ. ಈ ನಿಟ್ಟಿನಲ್ಲಿ ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಅಧ್ಯಕ್ಷ ಸಿ.ಎಸ್. ರಾವ್ ವಹಿಸಿದ್ದರು. ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ್ ಭಟ್, ಪ್ರಸಾದ್ ನೇತ್ರಾಲಯದ ಅಭಿವದ್ಧಿ ಅಧಿಕಾರಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು. ಸಂಸ್ಥೆಯ ಉಪಾಧ್ಯಕ್ಷ ವಿಶ್ವನಾಥ ಹೆಗ್ಡೆ ವಂದಿಸಿದರು. ಪ್ರಸಾದ್ ನೇತ್ರಾಲಯದ ಆಡಳಿತಾಧಿಕಾರಿ ಮಧ್ವವಲ್ಲಭ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.